ಸುದ್ದಿಗಾರರೊಂದಿಗೆ ಮಾತನಾಡಿರುವ ವಿನಯ್ ಕುಲಕರ್ಣಿ, ಕುಮಾರಸ್ವಾಮಿ ಅವರ ಆರೋಪಗಳನ್ನು ತಳ್ಳಿಹಾಕಿದ್ದು, ಕುಮಾರಸ್ವಾಮಿ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಗಣಿಗಾರಿಕೆ ನಡೆಸುತ್ತಿರುವ ಪ್ರದೇಶದಲ್ಲಿ ಇಟ್ಟಿರುವ ಪುಸ್ತಕಕ್ಕೂ ಹಾಗೂ ಸಂಸ್ಥೆಯ ಲೆಕ್ಕ ಪುಸ್ತಕದಲ್ಲಿನ ಅಂಕಿ-ಅಂಶಗಳಿಗೂ ಸಣ್ಣ ವ್ಯತ್ಯಾಸವಿದೆಯಷ್ಟೇ, ಈ ಬಗ್ಗೆ ಪ್ರಾಥಮಿಕ ವರದಿಗಳನ್ನಾಧರಿಸಿ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.