ದೆಹಲಿಯಲ್ಲಿ ನಡೆದ ರೈಸಿನಾ ಸಂವಾದದಲ್ಲಿ ಮಾತನಾಡಿದ ಸುಷ್ಮಾ ಸ್ವರಾಜ್ ಅವರು, ಭಯೋತ್ಪಾದನೆ ಕುರಿತ ಭಾರತದ ನಿಲುವು ಹಲವು ದಶಕಗಳಿಂದಲೂ ಒಂದೇ ಆಗಿದೆ. ದಿನಗಳೆದಂತೆ ಭಯೋತ್ಪಾದನೆ ಎಂಬುದು ನಾಶಪಡಿಸಲಾಗದ ಸಮಸ್ಯೆಯಾಗಿ ಪರಿಣಮಿಸಿದ್ದು, ಭಯೋತ್ಪಾದನೆಯನ್ನು ಬುಡಸಹಿತ ಕಿತ್ತೊಗೆಯುವವರೆಗೂ ಅದು ನಾಶವಾಗುವುದಿಲ್ಲ. ಡಿಜಿಟಲ್ ಯುಗದಲ್ಲಿ ಭಯೋತ್ಪಾದನೆ ಕೂಡ ಆಧುನೀಕರಣಗೊಳ್ಳುತ್ತಿದ್ದು, ಮೊದಲು ಭಯೋತ್ಪಾದಕರಿಗೆ ನೆರವು ನೀಡುತ್ತಿರುವ ರಾಷ್ಟ್ರಗಳನ್ನು ಗುರುತಿಸಿ ಅವುಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಪರೋಕ್ಷವಾಗಿ ಪಾಕಿಸ್ತಾನದ ವಿರುದ್ಧ ಕಿಡಿಕಾರಿದರು.