ದೆಹಲಿಯಲ್ಲಿ ನಡೆದೆ 2018ನೇ ಸಾಲಿನ ರೈಸಿನಾ ಸಂವಾದದಲ್ಲಿ ಮಾತನಾಡಿದ ಬಿಪಿನ್ ರಾವತ್ ಅವರು, ಭಾರತದ ಗಡಿ ನುಸುಳಿ ಬರುವ ಉಗ್ರರ ಬಳಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿದ್ದು, ಭವಿಷ್ಯದಲ್ಲಿ ಅಣ್ವಸ್ತ್ರಗಳು ಕೂಡ ಅವರ ಕೈವಶವಾಗುವ ಸಾಧ್ಯತೆ ಇದೆ. ಹೀಗಾಗಿ ಭವಿಷ್ಯದಲ್ಲಿ ದೇಶಕ್ಕೆ ಉಗ್ರರಿಂದ ಅಣು ಸಮರದ ಬೆದರಿಕೆ ಇದೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಅಣ್ವಸ್ತ್ರಗಳು ಸುಲಭದಲ್ಲಿ ಕೈವಶವಾಗುವ ಅಪಾಯ ಇರುವುದರಿಂದ ಮನುಕುಲ ನಾಶಕ್ಕೆ ಇದು ಕಾರಣವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.