ಬುಧವಾರ ರಾತ್ರಿ 11 ಗಂಟೆ ಸುಮಾರಿಗೂ ಪಾಕಿಸ್ತಾನ ಸೇನೆ ಜಮ್ಮು ಮತ್ತು ಕಾಶ್ಮೀರ ಆರ್'ಎಸ್ ಪುರ ಸೆಕ್ಟರ್ ಬಳಿಕ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದೆ. ಬಿಎಸ್ಎಫ್ ಎಂದಿಗೂ ಮೊದಲೂ ದಾಳಿ ಮಾಡುವುದಿಲ್ಲ. ಪಾಕಿಸ್ತಾನ ದಾಳಿ ಮಾಡಿದರೆ ದಾಳಿಗೆ ದಿಟ್ಟ ಉತ್ತರವನ್ನು ನೀಡುತ್ತದೆ. ಪಾಕಿಸ್ತಾನದ ದಾಳಿಗೆ ಹುತಾತ್ಮನಾದ ಮುಖ್ಯ ಪೇದೆ ಸುರೇಶ್ ಅವರ ಬಲಿದಾನ ವ್ಯರ್ಥವಾಗುವುದಿಲ್ಲ ಎಂದು ತಿಳಿಸಿದ್ದಾರೆ.