ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ಮತ್ತು ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ಪದ್ಮಾವತ್ ಚಿತ್ರದಿಂದಾಗಿ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುತ್ತದೆ ಎಂಬ ಕಾರಣ ನೀಡಿ ಚಿತ್ರಕ್ಕೆ ನೀಡಲಾಗಿರುವ ಪ್ರಮಾಣಪತ್ರವನ್ನು ರದ್ದು ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅಂತೆಯೇ ಅರ್ಜಿದಾರರ ವಿರುದ್ಧ ಕಿಡಿಕಾರಿರುವ ಸುಪ್ರೀಂ ಕೋರ್ಟ್ ಕಾನೂನು ಸುವ್ಯವಸ್ಥೆಯ ರಕ್ಷಣೆ ರಾಜ್ಯ ಸರ್ಕಾರದ ಕೆಲಸವಾಗಿದೆ. ಅಂತೆಯೇ ಚಿತ್ರಕ್ಕೆ ಪ್ರಮಾಣ ಪತ್ರ ನೀಡುವುದು ಸಿಬಿಎಫ್ ಸಿ ಕೆಲಸ ಎಂದು ಸ್ಪಷ್ಟಪಡಿಸಿದೆ.