2015ರಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ತನ್ನ 21 ಶಾಸಕರಿಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಿತ್ತು. ಇದು ಲಾಭದಾಯಕ ಹುದ್ದೆಯಾಗಿದ್ದು, ಸಂವಿಧಾನದ ಅಂಶ ಉಲ್ಲಂಘಸಿದಂತಾಗುತ್ತದೆ ಎಂದು ವಕೀಲರೊಬ್ಬರು ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದ ರಾಷ್ಟ್ರಪತಿಗಳು ಆಯೋಗದ ಅಭಿಪ್ರಾಯ ಕೇಳಿದ್ದರು. ಇದೀಗ ಚುನಾವಣಾ ಆಯೋಗ ತನ್ನ ವರದಿ ನೀಡಿದ್ದು, ವರದಿಯಲ್ಲಿ ಲಾಭದಾಯಕ ಹುದ್ದೆ ಹೊಂದಿರುವ ಆಪ್ 20 ಶಾಸಕರನ್ನು ಅನರ್ಹಗೊಳಿಸಲು ಶಿಫಾರಸ್ಸು ಮಾಡಿದೆ.