ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಪರಸ್ಪರ ಮಾತುಕತೆಯಿಂದ ಮಾತ್ರ ಪ್ರಸ್ತುತ ಉಲ್ಪಣವಾಗಿರುವ ಸಮಸ್ಯೆ ಇತ್ಯರ್ಥವಾಗಲಿದೆ. ಭಾರತದ ಭದ್ರತಾ ಸಲಹೆಗಾರರಾದ ಅಜಿತ್ ಧೋವಲ್ ಅವರು ಈ ಕೂಡಲೇ ಪಾಕಿಸ್ತಾನದ ಭದ್ರತಾ ಸಲಹೆಗಾರರೊಂದಿಗೆ ಚರ್ಚೆ ನಡೆಸಲೇಬೇಕಿದೆ. ಆಗ ಮಾತ್ರ ಕಣಿವೆ ರಾಜ್ಯದ ಗಡಿ ಗ್ರಾಮಗಳಲ್ಲಾಗುತ್ತಿರುವ ಭಾರಿ ಪ್ರಮಾಣದ ಶೆಲ್ ದಾಳಿ ಮತ್ತು ಗುಂಡಿನ ದಾಳಿ ನಿಲ್ಲಲಿದೆ. ಉಭಯ ದೇಶಗಳ ನಡುವೆ ಯಾವುದೇ ವಿಚಾರದಲ್ಲೂ ಭಿನ್ನಾಭಿಪ್ರಾಯವಿದ್ದರೂ, ಭಾರತ ಸರ್ಕಾರ ಗಡಿ ಗ್ರಾಮಗಳಲ್ಲಿನ ಶಾಂತಿಗೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.