ಪ್ರತೀ ಬಾರಿಯಂತೆಯೇ ಈ ಬಾರಿಯ ಭಾರತದ ಗಣರಾಜ್ಯೋತ್ಸವ ದಿನಾಚರಣೆಗೆ ಉಗ್ರ ದಾಳಿ ಭೀತಿ ಇದ್ದು, ಅಸಿಯಾನ್ ವಿಶ್ವ ನಾಯಕರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಹಾಜರಾಗುತ್ತಿರುವುದರಿಂದ ಈ ಬಾರಿ ಗಣರಾಜ್ಯೋತ್ಸವಕ್ಕೆ ವ್ಯಾಪಕ ಭದ್ರತೆ ಒದಗಿಸಲು ನಿರ್ಧರಿಸಲಾಗಿದೆ. ಅದರಂತೆ ಈಗಾಗಲೇ ಸಿದ್ಧತೆ ಆರಂಭವಾಗಿದೆಯಾದರು, ಗಣರಾಜ್ಯೋತ್ಸವ ದಿನದಂದು ದೇಶದಲ್ಲಿ ಭಯದ ವಾತಾರವರಣ ನಿರ್ಮಾಣ ಮಾಡಲು ಉಗ್ರರು ಹವಣಿಸುತ್ತಿದ್ದಾರೆ.