ಭಾರತದ ಬಿನ್ ಲಾಡೆನ್ ಎಂದೇ ಕುಖ್ಯಾತಿಗಳಿಸಿದ್ದ ಖುರೇಷಿ, ನಾಪತ್ತೆ ಮತ್ತು ವೇಷಬದಲಿಸಿಕೊಂಡು ತಿರುಗಾಡುತ್ತಿದ್ದರಲ್ಲಿ ನಿಸ್ಸೀಮನಾಗಿದ್ದನಂತೆ. ಇದೇ ಕಾರಣಕ್ಕೆ ಈತ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಚಳ್ಳೇ ಹಣ್ಣು ತಿನ್ನಿಸಿ ಪರಾರಿಯಾಗುತ್ತಿದ್ದ. ಅಲ್ಲದೆ ಬಾಂಬ್ ತಯಾರಿಕೆಯಲ್ಲೂ ನಿಪುಣನಾಗಿದ್ದ ಖುರೇಷಿ, ಈ ಹಿಂದೆ ಬೆಂಗಳೂರು ಮತ್ತು ಹೈದರಾಬಾದ್ ನ ಪ್ರತಿಷ್ಟಿತ ಐಟಿ ಕಂಪನೆಯಲ್ಲೂ ಕೆಲಸ ಮಾಡಿದ್ದನಂತೆ. 1998ರಲ್ಲಿ ಈತ ನಿಷೇಧಿತ ಉಗ್ರ ಸಂಘಟನೆ ಸಿಮಿ ಸೇರಿದ್ದ ಬಳಿಕ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸೇರಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.