2008ರ ಗುಜರಾತ್ ಸರಣಿ ಸ್ಫೋಟ ಪ್ರಕರಣ ಸಂಬಂಧ ಇಂದು ದೆಹಲಿ ಪೊಲೀಸರು 'ಭಾರತದ ಬಿನ್ ಲಾಡೆನ್ ಕುಖ್ಯಾತಿಯ ಉಗ್ರ ಅಬ್ದುಲ್ ಸುಭಾನ್ ಖುರೇಷಿಯನ್ನು ಬಂಧಿಸಿದ್ದು, ಈ ವೇಳೆ ಆತನನನ್ನು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆತ ಸ್ಫೋಟಕ ಮಾಹಿತಿ ಬಾಯಿ ಬಿಟ್ಟಿದ್ದು, ಖುರೇಶಿ ತನ್ನ ಹೆಸರು, ವಿಳಾಸ ಬದಲಿಸಿಕೊಂಡು ನಕಲಿ ದಾಖಲೆಗಳ ಸಹಾಯದಿಂದ ನೇಪಾಳದಲ್ಲಿ ವಾಸಿಸುತ್ತಿದ್ದನಂತೆ. ಇತ್ತೀಚೆಗಷ್ಟೇ ಖುರೇಷಿ ಭಾರತಕ್ಕೆ ಆಗಮಿಸಿದ್ದು, ಭಾರತದಲ್ಲಿ ನಿಷೇಧಕ್ಕೊಳಗಾಗಿರುವ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಮರುಜೀವ ನೀಡಲೆಂದೇ ಖುರೇಷಿ ಭಾರತಕ್ಕೆ ವಾಪಸ್ ಆಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.