20 ಆಪ್ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸಿಗೆ ಹೀಗಾಗಲೇ ರಾಷ್ಟ್ರಪತಿ ರಾಮನಾಥ್ ಕೊವಿಂಗ್ ಅವರು ಸಹಿ ಹಾಕಿದ್ದು, ಈ ಸಂಬಂಧ ಆಯೋಗ ಜನವರಿ 20ರಂದು ಅಧಿಸೂಚನೆಯನ್ನು ಹೊರಡಿಸಿದೆ. ಹೀಗಾಗಿ ಚುನಾವಣಾ ಆಯೋಗದ ಶಿಫಾರಸು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಈಗ 'ಅಪ್ರಸ್ತುತ'ವಾಗಿದೆ. ಅಧಿಸೂಚನೆಯನ್ನು ಪರಿಶೀಲಿಸಿದ ನಂತರ ಹೊಸದಾಗಿ ಅರ್ಜಿ ಸಲ್ಲಿಸುವುದಾಗಿ ಆಪ್ ಶಾಸಕರ ಪರ ವಕೀಲ ಮನಿಶ್ ವಶಿಷ್ಠ ಅವರು ತಿಳಿಸಿದ್ದಾರೆ.