ಏತನ್ಮಧ್ಯೆ ಚಿತ್ರ ಬಿಡುಗಡೆಗೆ ಅವಕಾಶ ನೀಡದಂತೆ ಆಗ್ರಹಿಸಿ ರಾಜಸ್ತಾನ, ಮಧ್ಯ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಚಿತ್ರ ಬಿಡುಗಡೆ ವಿರೋಧಿಸಿ ಕರ್ಣಿ ಸೇನಾ ಕಾರ್ಯಕರ್ತರ ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗತ್ತಿದೆ. ಗುಜರಾತ್ ನಲ್ಲಿ ಆಕ್ರೋಶಿತ ಕಾರ್ಯಕರ್ತರು ಸರ್ಕಾರಿ ಬಸ್ ಗೆ ಬೆಂಕಿ ಹಾಕಿದ್ದು, ರಾಜಸ್ತಾನದಲ್ಲಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಟೈರ್ ಗೆ ಬೆಂಕಿ ಹಾಕಿದ್ದಾರೆ. ಇನ್ನು ರಾಜಸ್ತಾನದ ಬಿಲ್ವಾರಾ ಗ್ರಾಮದಲ್ಲಿ ಯುವಕನೋರ್ವ 350 ಅಡಿ ಎತ್ತರದ ಮೊಬೈಲ್ ಟವರ್ ಏರಿ ಕುಳಿತಿದ್ದು, ಪದ್ಮಾವತ್ ಚಿತ್ರಕ್ಕೆ ಅವಕಾಶ ನೀಡದಂತೆ ಆಗ್ರಹಿಸಿದ್ದಾನೆ. ಇಲ್ಲವಾದಲ್ಲಿ ತಾನು ಟವರ್ ಮೇಲೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ.