ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಪೆರರಿವಾಲನ್, ಮುರುಗನ್, ಸಂತನ್, ನಳಿನಿ, ರಾಬರ್ಟ್ ಪಿಯೂಶ್, ಜಯಕುಮಾರ್ ಮತ್ತು ರವಿಚಂದ್ರನ್ ಅವರುಗಳು ಕಳೆದ 24 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ತಮಿಳುನಾಡು ಸರ್ಕಾರ ಇವರನ್ನು ಬಿಡುಗಡೆ ಗೊಳಿಸುವ ಉದ್ದೇಶದಿಂಡ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು.