2017ರ ಜುಲೈ 10ರಂದು ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಟೆಂಗೂ ಎಂಬಲ್ಲಿ ಉಗ್ರರ ತಂಡ ಅಮರನಾಥ ಯಾತ್ರಾರ್ಥಿಗಳ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ 14 ಯಾತ್ರಾರ್ಥಿಗಳು ಮೃತಪಟ್ಟಿದ್ದರು. ಅಲ್ಲದೆ ಹಲವರು ಗಾಯಗೊಂಡಿದ್ದರು. ಆದರೆ ಬಸ್ ಚಾಲಕ ಗಫೂರ್ ಅವರು ಗುಂಡಿನ ದಾಳಿಯ ನಡುವೆಯೂ ಬಸ್ಸನ್ನೂ ಸುರಕ್ಷಿತ ಸ್ಥಳಕ್ಕೆ ಚಲಾಯಿಸಿಕೊಂಡು ಹೋಗಿ 52 ಮಂದಿ ಪ್ರಾಣ ರಕ್ಷಿಸಿದ್ದರು.