ರಾಂಚಿ: ಮೇವು ಹಗರಣದ ಮೂರನೇ ಕೇಸಿನಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರನ್ನು ಅಪರಾಧಿ ಎಂದು ಕೇಂದ್ರ ತನಿಖಾ ದಳ(ಸಿಬಿಐ) ತೀರ್ಮಾನಿಸಿದೆ. ಮೂರನೇ ಮೇವು ಹಗರಣ ಕೇಸಿನಲ್ಲಿ ಇಂದು ಅಪರಾಹ್ನ 2 ಗಂಟೆಯ ಮೇಲೆ ವಿಶೇಷ ಸಿಬಿಐ ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.