ನವದೆಹಲಿ: ಪದ್ಮಾವತ್ ಚಿತ್ರ ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಶಾಲಾ ಮಕ್ಕಳನ್ನು ಕರೆದೊಯ್ಯುವ ವ್ಯಾನ್ ನ ಮೇಲೆ ಹರ್ಯಾಣದಲ್ಲಿ ನಡೆಸಿರುವ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ದೇಶದಲ್ಲಿ ದ್ವೇಷ ಮತ್ತು ಹಿಂಸೆಯ ದಳ್ಳುರಿಯನ್ನು ಹುಟ್ಟುಹಾಕುತ್ತಿದೆ ಎಂದು ಆರೋಪಿಸಿದ್ದಾರೆ.