ಪಣಜಿ: ರಾಜ್ಯದಲ್ಲಿ ಮಹದಾಯಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ಗೋವಾ ಸರ್ಕಾರ ಮಹದಾಯಿ ನದಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕ ಅಥವಾ ಮಹಾರಾಷ್ಟ್ರ ಕಾಲುವೆ ನಿರ್ಮಾಣ ಕಾಮಗಾರಿ ಮುಂದುವರೆಸಿವೆಯೇ ಎಂಬುದರ ಬಗ್ಗೆ ಮೇಲ್ವಿಚಾರಣೆ ನಡೆಸಲು ಗುರುವಾರ ವಿಶೇಷ ತಂಡ ರಚಿಸಿದೆ.