ಚುನಾವಣಾ ಆಯೋಗ ದೆಹಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ 21 ಶಾಸಕರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಮಾಜಿ ಸಂಸದ ಪಹಲ್ಮಾನ್ ಸುಬ್ಬ, ನವಿನ್ ಕಿರಣ್ ಮತ್ತು ಇತರರು ಲಾಭದಾಯಕ ಹುದ್ದೆ ಹೊಂದಿದ ಆರೋಪದ ಮೇಲೆ ಎಸ್ ಡಿಎಫ್ ನ 14 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ರಾಜ್ಯಪಾಲರು ಈಗ ಅದನ್ನು ಚುನಾವಣಾ ಆಯೋಗಕ್ಕೆ ಕುಳುಹಿಸಿದ್ದಾರೆ.