ಪದ್ಮಾವತ್ ಚಿತ್ರ ಸಂಬಂಧ ಈ ಹಿಂದೆಯೇ ಸುಪ್ರೀಂ ಕೋರ್ಟ್ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದರ ಹೊರತಾಗಿಯೂ ನಡೆಯುತ್ತಿರುವ ಪ್ರತಿಭಟಗಳ ವಿರುದ್ಧ ಸರ್ವೋಚ್ಛ ನ್ಯಾಯಾಲಯ ತನ್ನ ಆಕ್ರೋಶ ವ್ಯಕ್ತಪಡಿಸಿದೆ. ಪ್ರಮುಖವಾಗಿ ಮಿತಿ ಮೀರಿದ ಕರ್ಣಿ ಸೇನಾ ಪ್ರತಿಭಟನೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ರಾಜಸ್ಥಾನ, ಹರಿಯಾಣ, ಗುಜರಾತ್ ಮತ್ತು ಮಧ್ಯಪ್ರದೇಶ ಸರ್ಕಾರಗಳ ವಿರುದ್ಧ ಸುಪ್ರೀಂ ಕೋರ್ಟ್ ತನ್ನ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ದಾಖಲಾಗಿರುವ ನ್ಯಾಯಾಂದ ನಿಂದನೆ ಪ್ರಕರಣದ ವಿಚಾರಣೆಯನ್ನು ಸರ್ವೋಚ್ಥ ನ್ಯಾಯಾಲಯ ಇಂದು ನಡೆಸಲಿದೆ.