ಜಮ್ಮು ಮತ್ತು ಕಾಶ್ಮೀರ ಸೇರಿದಂದೆತ ದೇಶದ ವಿವಿಧ ಭಾಗದ ಅಂತರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಭಾರತೀಯ ಯೋಧರು ಹಾಗೂ ನಾಗರೀಕರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ಹಾಗೂ ಶೆಲ್ ಗಳ ದಾಳಿ ನಡೆಸುತ್ತಲೇ ಇದೆ. ಈ ಹಿನ್ನಲೆಯಲ್ಲಿ ಬಿಎಸ್ಎಫ್ ಪಡೆ ಪಾಕಿಸ್ತಾನದೊಂದಿಗೆ ಸಿಹಿ ಹಂಚಿಕೊಳ್ಳಲು ನಿರಾಕರಿಸಿರುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.