ನಿನ್ನೆ ಮಥುರಾ-ಬರೇಲಿ ಹೆದ್ದಾರಿಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಎಬಿವಿಪಿ ಕಾರ್ಯಕರ್ತರು ಮೆರವಣಿಗೆ ನಡೆಸುತ್ತಿದ್ದ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಚಂದನ್ಗುಪ್ತಾ ಎಂಬ ಯುವಕ ಮೃತಪಟ್ಟಿದ್ದರು. ಬಳಿಕ ಹಿಂಸಾಚಾರ ಭುಗಿಲೆದ್ದಿದ್ದು, ಹಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಹಿಂಸಾಚಾರದ ಬಳಿಕ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಈಗಲೂ ಉದ್ವಿಗ್ನ ಪರಿಸ್ಥಿತಿ ಇದೆ.