ರಾಜಸ್ತಾನ, ಹರಿಯಾಣ ಮತ್ತು ಉತ್ತರಪ್ರದೇಶಗಳಲ್ಲಿ ಹೆಚ್ಚಾಗಿ ಪ್ರಕರಣಗಳು ವರದಿಯಾಗಿದ್ದು ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ಹಿಂದೆ ಪ್ರಕರಣಗಳ ಕುರಿತು ಪರೀಕ್ಷಿಸಲು ವಿಶೇಷ ಸಮಿತಿಯೊಂದನ್ನು ರಚನೆ ಮಾಡುವಂತೆ ಆದೇಶಿಸಿತ್ತು. ಆದರೆ ಇಲ್ಲಿಯವರೆಗೂ ಮೂರು ರಾಜ್ಯಗಳು ಯಾವುದೇ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿದ್ದು ನೋಟಿಸ್ ಗೆ ಪ್ರತಿಕ್ರಿಯಿಸುವಂತೆ ಸೂಚಿಸಿದೆ.