ಶಿಕ್ಷೆ ಅವಧಿ ಇನ್ನು ಎಂಟು ತಿಂಗಳು ಇರುವಂತೆ ಸಂಜಯ್ ದತ್ ಅವರನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿ ಪುಣೆಯ ನಿವಾಸಿ ಪ್ರದೀಪ್ ಭಾಲೆಕರ್ ಎಂಬುವರು ಬಾಂಬೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠದ ನ್ಯಾಯಧೀಶರಾದ ಎಸ್ ಸಿ ಧರ್ಮಾಧಿಕಾರಿ ಮತ್ತು ಭಾರತಿ ಡಾಂಗ್ರೆ ಅವರು ಅವಧಿಗೂ ಮುನ್ನ ಸಂಜಯ್ ದತ್ ಬಿಡುಗಡೆ ಮಾಡಿರುವುದರಲ್ಲಿ ರಾಜ್ಯ ಸರ್ಕಾರ ಯಾವುದೇ ಉಲ್ಲಂಘನೆ ಮಾಡಿಲ್ಲ ಎಂದು ಆದೇಶಿಸಿದೆ.