ಕೇಂದ್ರ ಬಜೆಟ್ ಮಂಡನೆ ಅಂತ್ಯ: ಸಂಸತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ

2018-19ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಅಂತ್ಯಗೊಂಡಿದ್ದು, ಸಂಸತ್ ಕಲಾಪವನ್ನು ಸೋಮವಾರಕ್ಕೆ ಮೂಂದೂಡಲಾಗಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ನವದೆಹಲಿ: 2018-19ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಅಂತ್ಯಗೊಂಡಿದ್ದು, ಸಂಸತ್ ಕಲಾಪವನ್ನು ಸೋಮವಾರಕ್ಕೆ ಮೂಂದೂಡಲಾಗಿದೆ. 
ಮಹಾರಾಷ್ಟ್ರ ಬಿಜೆಪಿ ಸಂಸದ ಚಿಂತಾಮನ್ ವನಗ ಅವರು ನಿಧನ ಹೊಂದಿರುವ ಹಿನ್ನಲೆಯಲ್ಲಿ ನಾಳೆ ಸಂಸತ್ತು ಕಾರ್ಯನಿರ್ವಹಿಸುತ್ತಿಲ್ಲ. ಇದರಂತೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. 
ಸಂಸತ್ತಿನಲ್ಲಿ ಅಗಲಿದ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ನಂತರ ಕಲಾಪವನ್ನು ಆರಂಭಿಸಲಾಗುತ್ತದೆ. ಕಳೆದ ವರ್ಷ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡುತ್ತಿದ್ದ ವೇಳೆ ಇ ಅಹಮದ್ ಅವರು ಕುಸಿದು ಬಿದ್ದಿದ್ದರು. ಆದರೂ, ಬಜೆಟ್ ಮಂಡನೆ ಮಂಡನೆ ಮಾಡಲಾಗಿತ್ತು. 
ನಿನ್ನೆಯಷ್ಟೇ ಮಹಾರಾಷ್ಟ್ರ ಬಿಜೆಪಿ ಸಂಸದ ಚಿಂತಾಮನ್ ವನಗ ಅವರು ತೀವ್ರವಾಗಿ ಅಸ್ವಸ್ತಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿದ ಅರ್ಧ ಗಂಟೆ ಬಳಿಕ ವನಗ ಅವರು ಮೃತಪಟ್ಟಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com