ಮಂಡ್ಸಾರ್ ಅತ್ಯಾಚಾರ ಪ್ರಕರಣ: ಅತ್ಯಾಚಾರಿಯ ಶಿರಚ್ಛೇಧ ಮಾಡಿದರೆ 5 ಲಕ್ಷ ಬಹುಮಾನ ಘೋಷಿಸಿದ ಬಿಜೆಪಿ

ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಮಂಡ್ಸಾರ್ ಅತ್ಯಾಚಾರ ಪ್ರಕರಣದ ಅತ್ಯಾಚಾರಿಯ ಶಿರಚ್ಛೇಧ ಮಾಡಿದರೆ 5 ಲಕ್ಷ ಬಹುಮಾನ ನೀಡುವುದಾಗಿ ಬಿಜೆಪಿ ನಾಯಕ ಸಂಜೀವ್ ಮಿಶ್ರಾ ಹೇಳಿದ್ದಾರೆ.
ಬಿಜೆಪಿ ನಾಯಕ ಸಂಜೀವ್ ಮಿಶ್ರಾ
ಬಿಜೆಪಿ ನಾಯಕ ಸಂಜೀವ್ ಮಿಶ್ರಾ
Updated on
ನವದೆಹಲಿ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಮಂಡ್ಸಾರ್ ಅತ್ಯಾಚಾರ ಪ್ರಕರಣದ ಅತ್ಯಾಚಾರಿಯ ಶಿರಚ್ಛೇಧ ಮಾಡಿದರೆ 5 ಲಕ್ಷ ಬಹುಮಾನ ನೀಡುವುದಾಗಿ ಬಿಜೆಪಿ ನಾಯಕ ಸಂಜೀವ್ ಮಿಶ್ರಾ ಹೇಳಿದ್ದಾರೆ. 
ಮಧ್ಯಪ್ರದೆಶದ ಮಂಡ್ಸಾರ್ ನಲ್ಲಿ 7 ವರ್ಷದ ಬಾಲಕಿಯ ಮೇಲೆ ಇರ್ಫಾನ್ ಖಾನ್ (20) ಆಸೀಫ್ (24) ಭೀಕರವಾಗಿ ಅತ್ಯಾಚಾರ ನಡೆಸಿದ್ದರು.  ನಿರ್ಭಯಾ ಪ್ರಕರಣದ ಮಾದರಿಯಲ್ಲೆ 7 ವರ್ಷದ ಬಾಲಕಿಯ ಮರ್ಮಾಂಗವನ್ನು ಘಾಸಿಗೊಳಿಸಿದ್ದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗಬೇಕೆಂಬ ಒತ್ತಾಯ ದೇಶಾದ್ಯಂತ ಕೇಳಿಬರುತ್ತಿದ್ದರೆ, ಬಿಜೆಪಿ ನಾಯಕ ಸಂಜೀವ್ ಮಿಶ್ರಾ ಗ್ಯಾಂಗ್ ರೇಪ್ ಆರೋಪಿಗಳ ಶಿರಚ್ಛೇಧ ಮಾಡಿದವರಿಗೆ 5 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. 
ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸುವುದಕ್ಕೆ ಕಾನೂನು ಅಥವಾ ಆಡಳಿತ ವಿಫಲವಾದರೆ ಅತ್ಯಾಚಾರಿಗಳ ಶಿರಚ್ಛೇಧ ಮಾಡುವವರಿಗೆ 5 ಲಕ್ಷ ಬಹುಮಾನ ನೀಡುವುದಾಗಿ ಸಂಜೀವ್ ಮಿಶ್ರಾ ಹೇಳಿದ್ದಾರೆ. ಶಾಲೆ ಮುಗಿಸಿಕೊಂಡು ವಾಪಸ್ಸಾಗಬೇಕಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ಯಲು ಪೋಷಕರು ಬರುವ ವೇಳೆಗೆ ತಡವಾಗಿತ್ತು. ಇದೇ ಪರಿಸ್ಥಿತಿಯ ಲಾಭ ಪಡೆದಿದ್ದ ಇರ್ಫಾನ್ ಖಾನ್ (20) ಆಸೀಫ್ (24) ಬಾಲಕಿಗೆ ಸಿಹಿ ತಿನಿಸುಗಳ ಆಮಿಷವೊಡ್ಡಿ ಕರೆದೊಯ್ದು ಭೀಕರವಾಗಿ ಅತ್ಯಾಚಾರವೆಸಗಿ, ಗುದದ್ವಾರದ ಚರ್ಮವನ್ನು ಛಿದ್ರಗೊಳಿಸಿ ಜನನಾಂಗದಲ್ಲಿ ವಸ್ತುಗಳನ್ನು ತುರುಕಿದ್ದರು.  ಅತ್ಯಾಚಾರಕ್ಕೊಳಗಾದ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com