ದೇಶ
ಮಹಾರಾಷ್ಟ್ರ; ಮಕ್ಕಳ ಕಳ್ಳರೆಂದು ಅನುಮಾನಿಸಿ ಐವರ ಹತ್ಯೆ: 23 ಮಂದಿ ಬಂಧನ
ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಮಕ್ಕಳ ಕಳ್ಳರೆಂದು ಅನುಮಾನಿಸಿ ಭಾನುವಾರ ಐವರನ್ನು ಹತ್ಯೆ ಮಾಡಿದ....
ಮುಂಬೈ: ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಮಕ್ಕಳ ಕಳ್ಳರೆಂದು ಅನುಮಾನಿಸಿ ಭಾನುವಾರ ಐವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ 23 ಮಂದಿಯನ್ನು ಬಂಧಿಸಿದ್ದಾರೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಈಗಾಗಲೇ 23 ಆರೋಪಿಗಳನ್ನು ಬಂಧಿಸಿದ್ದೇವೆ ಮತ್ತು ಇನ್ನು ಕೆಲವರನ್ನು ಬಂಧಿಸಲಾಗುವುದು ಎಂದು ದುಲೈ ಪೊಲೀಸ್ ವರಿಷ್ಠಾಧಿಕಾರಿ ಎಂ ರಾಮಕುಮಾರ್ ಅವರು ತಿಳಿಸಿದ್ದಾರೆ.
ಆರೋಪಿಗಳ ಬಂಧನಕ್ಕಾಗಿ ಐದು ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸುವುದಾಗಿ ಅವರು ತಿಳಿಸಿದ್ದಾರೆ.
ನಿನ್ನೆ ಹತ್ಯೆಯಾದ ಐವರನ್ನು ಸೊಲ್ಲಾಪುರದ ಮಂಗಲ್ವೇದಾ ತೆಹ್ಸಿಲ್ ಖಾವೆ ಗ್ರಾಮದ ಭರತ್ ಶಂಕರ್ ಬೋಸ್ಲೆ(45), ಸಹೋದರ ದಾದಾರಾವ್ ಬೋಸ್ಲೆ, ರಾಜು ಬೋಸ್ಲೆ ಮತ್ತು ಭರತ್ ಮಾಲ್ವೆ ಎಂದು ಗುರುತಿಸಲಾಗಿದೆ.
ಭಾನುವಾರ ಬೆಳಗ್ಗೆ 11.30ರ ಸುಮಾರಿಗೆ ರಾಯಿನ್ ಪಾಡ್ ಗ್ರಾಮದಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ಐವರು ಪುರುಷರನ್ನು ಜನರ ಗುಂಪೊಂದು ಕಲ್ಲು, ದೊಣ್ಣೆಗಳಿಂದ ಬಡಿದು ಸಾಯಿಸಿತ್ತು.