ಜುಲೈ ತಿಂಗಳು ತಮಿಳುನಾಡಿಗೆ 31 ಟಿಎಂಸಿ ನೀರು ಬಿಡಿ: ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ

ಸುಪ್ರೀಂ ಕೋರ್ಟ್‌ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ಸುಪ್ರೀಂ ಕೋರ್ಟ್‌ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚರ್ಚೆ ನಡೆಸಿ, ಸುಪ್ರೀಂ ಆದೇಶದಂತ ಕರ್ನಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ. ಹೀಗಾಗಿ ಕೇಂದ್ರ ಜಲ ಆಯೋಗದಿಂದ ಅಂಕಿ-ಅಂಶ ಪಡೆದು ನೀರನ್ನು ಬಿಡುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಕರ್ನಾಟಕ ತಿಳಿಸಿದೆ.
ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಎಸ್‌. ಮಸೂದ್‌ ಹುಸೇನ್‌ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಅವರು ಭಾಗವಹಿಸಿದ್ದರು.
ಇನ್ನು ಪ್ರಾಧಿಕಾರದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು, ತರಾತುರಿಯಲ್ಲಿ ನಾನು ಏನನ್ನೂ ಹೇಳೋದಿಲ್ಲ. ತಮಿಳುನಾಡು ಅಗತ್ಯಕ್ಕಿಂತ ಹೆಚ್ಚು ನೀರಿನ ಬೇಡಿಕೆ ಇಟ್ಟಿದೆ. ಅವ್ರು ಹೇಳಿದ ಕೂಡಲೇ ಬಿಡೋದಕ್ಕೆ ನೀರು ಬೇಕಲ್ವಾ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com