ಮಹಾರಾಷ್ಟ್ರ: ಮಕ್ಕಳ ಕಳ್ಳರೆಂದು ಶಂಕಿಸಿ ಮತ್ತೆ ಭಿಕ್ಷಕ ದಂಪತಿ ಮೇಲೆ ಹಲ್ಲೆ

ನಾಸಿಕ್ ಜಿಲ್ಲೆಯ ಮಾಲೆಗಾಂವ್ ನಲ್ಲಿಯೂ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದ ಸುಳ್ಳು ವದಂತಿಯಿಂದ ಮಕ್ಕಳ ಕಳ್ಳರೆಂದು ಭಾವಿಸಿ ಭಿಕ್ಷುಕ ದಂಪತಿ ಮೇಲೆ ಹಲ್ಲೆ ನಡೆಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮಾಲೆಗಾಂವ್ : ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಮಕ್ಕಳ ಕಳ್ಳರೆಂದು ಅನುಮಾನಿಸಿ ಭಾನುವಾರ ಐವರನ್ನು ಹತ್ಯೆ ಮಾಡಿದ ಬೆನ್ನಲ್ಲೇ   ನಾಸಿಕ್ ಜಿಲ್ಲೆಯ  ಮಾಲೆಗಾಂವ್ ನಲ್ಲಿಯೂ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದ ಸುಳ್ಳು ವದಂತಿಯಿಂದ ಮಕ್ಕಳ ಕಳ್ಳರೆಂದು ಭಾವಿಸಿ ಭಿಕ್ಷುಕ ದಂಪತಿ ಮೇಲೆ ಹಲ್ಲೆ ನಡೆಸಲಾಗಿದೆ.
ಅದೃಷ್ಟವಶಾತ್ ,  ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಭಾವ್ಯ ದುರಂತವನ್ನು ತಪ್ಪಿಸಿ,  ಭಿಕ್ಷುಕ ದಂಪತಿಯನ್ನು ರಕ್ಷಿಸಿದ್ದಾರೆ.
ಕಳೆದ ರಾತ್ರಿ ಗಜನಾನ್ ಗಿರ್  (40) ಹಾಗೂ ಆತನ ಪತ್ನಿ ಸಿಂಧುಬಾಯಿ  ಗಿರ್ (35)  ಅಜಾದ್ ನಗರ ಸುತ್ತಮುತ್ತ ಭಿಕ್ಷೆ ಬೇಡುತ್ತಿದ್ದಾಗ ಅಲ್ಲಿಗೆ ಬಂದ ಗುಂಪೊಂದು ಮಕ್ಕಳ ಕಳ್ಳರೆಂದು ಅನುಮಾನಿಸಿ ಹಲ್ಲೆ ಮಾಡಿದ್ದಾರೆ.
ಇದನ್ನು ನೋಡಿದ ಕೆಲವರು ಪೊಲೀಸರಿಗೆ ಸುದ್ದಿ ಮಟ್ಟಿಸಲಾಗಿ, ಸ್ಥಳಕ್ಕೆ ಬಂದ ಪೊಲೀಸರು  ಮುಂದೆ ಅಗಬಹುದಾಗಿದ್ದ ದುರಂತವನ್ನು ತಪ್ಪಿಸಿದ್ದಾರೆ.
ಭಿಕ್ಷುಕ ದಂಪತಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಯಿತು. ಪೊಲೀಸರು ಜಿಂಟೂರು ಠಾಣೆಗೆ ಕರೆ ಮಾಡಿ ದಂಪತಿ ಹಿನ್ನೆಲೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಅಪರಿಚಿತರ ವಿರುದ್ಧ ಅಜಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com