ಮುಂಬಯಿ: ಮುಂಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಂದು ಬೆಳಗ್ಗೆ 7.30ಕ್ಕೆ ಅಂಧೇರಿ ಗೋಖಲೆ ಬ್ರಿಡ್ಜ್ನ ಅರ್ಧ ಭಾಗ ಕುಸಿದುಹೋಗಿದೆ.
ಗೋಖಲೆ ಬ್ರಿಡ್ಜ್ ಅಂಧೇರಿಯ ಪೂರ್ವ ಮತ್ತು ಪಶ್ಚಿಮ ಭಾಗದ ರೈಲ್ವೆ ಸ್ಟೇಷನ್ಗಳನ್ನು ಸಂಪರ್ಕಿಸುವ ಸೇತುವೆಯಾಗಿದೆ. ದಿನಕ್ಕೆ ಸಾವಿರಾರು ರೈಲುಗಳು ಓಡಾಡುವ ಬೃಹತ್ ಸೇತುವೆ ಕುಸಿದ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಇದರಿಂದ ಸಾವಿರಾರು ರೈಲು ಪ್ರಯಾಣಿಕರು ಪರದಾಡುವಂತಾಗಿದೆ. ಸೇತುವೆ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎನ್ ಡಿ ಆರ್ ಎಫ್, ಮತ್ತು ಅಗ್ನಿಶಾಮಕ ದಳ ಅಧಿಕಾರಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.