ಭಾರತೀಯರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಚಿವೆ ಸುಷ್ಮಾ ಸ್ವರಾಜ್ ಅವರು, ಸಿಮಿಕೋಟ್ ನಲ್ಲಿ 525 ಯಾತ್ರಾರ್ಥಿಗಳು, ಹಿಲ್ಸಾದಲ್ಲಿ 550 ಮತ್ತು ಟಿಬೆಟ್ ನಲ್ಲಿ 500 ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ಸಂಕಷ್ಟದಲ್ಲಿರುವ ಭಾರತೀಯ ಪ್ರಜೆಗಳನ್ನು ರಕ್ಷಣೆ ಮಾಡಲು ನೇಪಾಳ ಸೇನಾ ಹೆಲಿಕಾಪ್ಟರ್ ಗಳ ನೆರವು ಕೇಳಲಾಗಿದೆ ಎಂದು ಹೇಳಿದ್ದಾರೆ.