ಶಶಿ ತರೂರ್
ಶಶಿ ತರೂರ್

ಸುನಂದಾ ಪುಷ್ಕರ್ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಶಶಿ ತರೂರ್ ಅರ್ಜಿ

ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಆಕೆಯ ಪತಿ, ಕಾಂಗ್ರೆಸ್ ಸಂಸದ ಶಶಿತರೂರ್ ನಿರೀಕ್ಷಣಾ ಜಾಮೀನು ಪಡೆಯಲು ಮುಂದಾಗಿದ್ದಾರೆ.
Published on
ನವದೆಹಲಿ: ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಆಕೆಯ ಪತಿ, ಕಾಂಗ್ರೆಸ್ ಸಂಸದ ಶಶಿತರೂರ್ ನಿರೀಕ್ಷಣಾ ಜಾಮೀನು ಪಡೆಯಲು ಮುಂದಾಗಿದ್ದಾರೆ. 
ಶಶಿತರೂರ್ ಗೆ ಸಮನ್ಸ್ ಜಾರಿ ಮಾಡಿದ್ದ ದೆಹಲಿ ಕೋರ್ಟ್, ಹಾಜರಾಗಲು ಜುಲೈ. 7 ವರೆಗೆ ಅವಕಾಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಶಶಿ ತರೂರ್ ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಸುನಂದಾ ಪುಷ್ಕರ್ ಅನುಮಾನಾಸ್ಪದ ಪ್ರಕರಣದಲ್ಲಿ ತಾವು ನಿರ್ದೋಷಿ ಎಂದು ಹೇಳಿದ್ದಾರೆ. ಆದರೆ ದೆಹಲಿ ಕೋರ್ಟ್ ಮಾತ್ರ ಶಶಿ ತರೂರ್ ವಿರುದ್ಧದ ವಿಚಾರಣೆಯನ್ನು ಮುಂದುವರೆಸಲು ಸಾಕಷ್ಟು ಪುರಾವೆಗಳಿವೆ ಎಂದು ಹೇಳಿದೆ. 
ಸುನಂದಾ ಪುಷ್ಕರ್ ಪ್ರಕರಣದಲ್ಲಿ ಸುಮಾರು 3,000 ಪುಟಗಳ ಚಾರ್ಚ್ ಶೀಟ್ ನಲ್ಲಿ ಶಶಿ ತರೂರ್ ಅವರ ಹೆಸರನ್ನೂ ಉಲ್ಲೇಖಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com