ಮಹಾತ್ಮ ಗಾಂಧಿ ಬಗ್ಗೆ ಮಾತನಾಡುವ ಆರ್ ಎಸ್ ಎಸ್ ಗೋಡ್ಸೆಯನ್ನು ಅನುಸರಿಸುತ್ತದೆ: ರಾಹುಲ್ ಗಾಂಧಿ

ರಾಷ್ಟ್ರಪಿತ ಮಹಾತ್ಮ ಗಾಂಧಿ ಬಗ್ಗೆ ಮಾತನಾಡುವ ಆರ್ ಎಸ್ ಎಸ್ ನಾಯಕರು ನಾಥೂರಾಮ್ ಗೋಡ್ಸೆಯನ್ನು ಅನುಸರಿಸುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on
ಅಮೇಥಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಬಗ್ಗೆ ಮಾತನಾಡುವ ಆರ್ ಎಸ್ ಎಸ್ ನಾಯಕರು ನಾಥೂರಾಮ್  ಗೋಡ್ಸೆಯನ್ನು ಅನುಸರಿಸುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಆರ್ ಎಸ್ ಎಸ್ ದೇಶಕ್ಕೆ ಯಾವ ಕೊಡುಗೆಯನ್ನು ನೀಡಲಿಲ್ಲ, ಆದರೆ  ಅವರು ಇತಿಹಾಸವನ್ನು ವಿರೂಪಗೊಳಿಸುತ್ತಿದ್ದಾರೆ ಎಂದು ದೂರಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ದೇಶಕ್ಕೆ ಅಪಾರ ಕೊಡುಗೆ ನೀಡುವುದರ ಜೊತೆಗೆ  ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಎಂದು ಅಮೇಥಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಮಹಾತ್ಮ ಗಾಂಧಿ ಬಗ್ಗೆ ಮಾತನಾಡುವ ಆರ್ ಎಸ್ ಎಸ್, ಗಾಂಧಿಯನ್ನು ಕೊಂದ ಗೋಡ್ಸೆಯನ್ನು ತಮ್ಮ ರೋಲ್ ಮಾಡೆಲ್ ಮಾಡಿಕೊಂಡಿದೆ ಎಂದು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com