ಸಮರ್ಥನೆಗಾಗಿ ಸಂಪರ್ಕ ಪ್ರಚಾರ: ಸೆಹ್ವಾಗ್ ಭೇಟಿ ಮಾಡಿದ ರಾಜ್ಯವರ್ಧನ್ ರಾಥೋರ್

ಸಮರ್ಥನೆಗಾಗಿ ಸಂಪರ್ಕ ಪ್ರಚಾರದ ಭಾಗವಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್ ಹಿರಿಯ ಕ್ರಿಕೆಟ್ ಆಟಗಾರ ಸೆಹ್ವಾಗ್ ಅವರನ್ನು ಭೇಟಿ ಮಾಡಿದರು.
ರಾಜ್ಯವರ್ಧನ್  ರಾಥೋರ್ , ಸೆಹ್ವಾಗ್
ರಾಜ್ಯವರ್ಧನ್ ರಾಥೋರ್ , ಸೆಹ್ವಾಗ್
Updated on

ನವದೆಹಲಿ: ಸಮರ್ಥನೆಗಾಗಿ ಸಂಪರ್ಕ ಪ್ರಚಾರದ ಭಾಗವಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ   ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್  ಹಿರಿಯ ಕ್ರಿಕೆಟ್ ಆಟಗಾರ ಸೆಹ್ವಾಗ್ ಅವರನ್ನು ಭೇಟಿ ಮಾಡಿದರು.

ನಂತರ ಮಾತನಾಡಿದ ರಾಜ್ಯವರ್ಧನ್ ಸಿಂಗ್ ರಾಥೋರ್, ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಾಲ್ಕು ವರ್ಷದ ಸಾಧನೆಗಳನ್ನು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಸಮರ್ಥನೆಗಾಗಿ ಸಂಪರ್ಕ ಪ್ರಚಾರ ಹಮ್ಮಿಕೊಂಡಿದ್ದು,  ಸಮಾಜದ ಗಣ್ಯರನ್ನು ಭೇಟಿ ಮಾಡುವ ಮೂಲಕ  ಸಮಾಜದ ಮೇಲೆ ಪರಿಣಾಮ ಬೀರಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರಸರ್ಕಾರದ ಆಡಳಿತದ ಬಗ್ಗೆಯೂ ಅವರಿಂದ ಸಲಹೆ ಪಡೆದುಕೊಳ್ಳಲಾಗುತ್ತಿದ್ದು, ಸೆಹ್ವಾಗ್ ಕೂಡಾ ಕೆಲವೊಂದು ಸಲಹೆ ನೀಡಿದ್ದಾರೆ. ಕ್ರೀಡಾಪಟುಗಳು ಇಂದಿನ ಯುವಜನಾಂಗದ ಮೇಲೆ ಹೇಗೆ ಪರಿಣಾಮ ಬೀರಬಹುದೆಂಬ ಬಗ್ಗೆ ತಮ್ಮೊಂದಿಗೆ ಸೆಹ್ವಾಗ್ ಅಭಿಪ್ರಾಯ ಹಂಚಿಕೊಂಡಿರುವುದಾಗಿ ರಾಜ್ಯವರ್ಧನ್ ಸಿಂಗ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com