ದ್ವೇಷ ಭಾಷಣಗಳನ್ನು ನೀಡುವ ಮೂಲಕ ಭಾರತದ ಐಕ್ಯತೆ, ಸಮಗ್ರತೆ ಹಾಗು ಸರ್ವಭೌಮತೆಯನ್ನು ಅಪಾಯಕ್ಕೆ ಸಿಲುಕಿಸುವ ಕೆಲಸವನ್ನು ಅಂದ್ರಾಬಿ ಮಾಡುತ್ತಿದ್ದಾರೆ. ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಿಸಬೇಕೆಂದು ಬಹಿರಂಗವಾಗಿ ಹೇಳುವ ಆಸಿಯಾ, ದೇಶದ ವಿರುದ್ಧ ಹಿಂಸಾಚಾರ ನಡೆಸಲು ಜಿಹಾದ್ಗೆ ಕರೆ ನೀಡಿದ್ದಾಳೆ ಎಂದು ಆಕೆಯ ವಿರುದ್ಧದ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಈಕೆ ನಡೆಸುತ್ತಿರುವ ಸಂಘಟನೆ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ವಿವಿಧ ಸಮುದಾಯಗಳ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುಲಾಗುತ್ತಿದ್ದು ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು ಕಷ್ಟವಾಗುತ್ತಿದೆ ಈ ಹಿಂದೆ ಗೃಹ ಸಚಿವಾಲಯಕ್ಕೆ ಕೆಲ ದೂರುಗಳು ಬಂದಿದ್ದವು.