ಅಕ್ರಮ ಸಂಬಂಧ: ಸಿಕ್ಕಿಬಿದ್ದ ಜೋಡಿಗೆ ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ, 2 ಬಂಧನ

ಅಕ್ರಮ ಸಂಬಂಧ ಬೆಳೆಸಿಕೊಂಡು, ಸಿಕ್ಕಿಬಿದ್ದ ಜೋಡಿಯನ್ನು ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿರುವ ಘಟನೆ ರಾಜಸ್ತಾನದ ಗ್ರಾಮವೊಂದರಲ್ಲಿ ನಡೆದಿದೆ...
ಉದಯ್ಪುರ: ಅಕ್ರಮ ಸಂಬಂಧ ಬೆಳೆಸಿಕೊಂಡು, ಸಿಕ್ಕಿಬಿದ್ದ ಜೋಡಿಯನ್ನು ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿರುವ ಘಟನೆ ರಾಜಸ್ತಾನದ ಗ್ರಾಮವೊಂದರಲ್ಲಿ ನಡೆದಿದೆ.
ಪ್ರಿಯಕರನ್ನು ಭೇಟಿ ಮಾಡುವ ಸಲುವಾಗಿ ಮಹಿಳೆ ತೆರಳಿದ್ದಳು. ಈ ವಿಚಾರ ತಿಳಿದ ಪತಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾನೆ. ಜೋಡಿಗಳು ಸಿಕ್ಕಿ ಬೀಳುತ್ತಿದ್ದಂತೆಯೇ ಇಬ್ಬರಿಗೂ ಥಳಿಸಿ, ವಿವಸ್ತ್ರಗೊಳಿಸ್ತ್ರಗೊಳಿಸಿ ಮೆರಣವಣಿಗೆ ಮಾಡಿದ್ದಾರೆ. ಅಲ್ಲದೆ, ಘಟನೆಯ ದೃಶ್ಯಾವಳಿಗಳನ್ನು ಕೆಲವರು ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಇಬ್ಬರನ್ನು ಬಂಧನಕ್ಕೊಳಪಡಿಸಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಉದಯ್ಪುರ ಎಎಸ್'ಪಿ ಹರ್ಷ್ ರತ್ನೂ ಅವರು ಹೇಳಿದ್ದಾರೆ.
ರಾಜಸ್ಥಾನದಲ್ಲಿ ಇಂತಹ ಘಟನೆಗಳು ಹೊಸದೇನಲ್ಲ. ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿಯೂ ಇಂತಹದ್ದೇ ಘಟನೆಯೊಂದು ನಡೆದಿತ್ತು. ಮಹಿಳೆ ಹಾಗೂ ವ್ಯಕ್ತಿಯೊಬ್ಬರಿಗೆ ಗಂಭೀರವಾಗಿ ಥಳಿಸಿದ್ದ ಜನರು, ಇಬ್ಬರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com