ತೈಲ ಟ್ಯಾಂಕರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ರಸಲ್ಪುರ್ ನಿವಾಸಿಯಾದ ಸುರೇಂದ್ರ ಎಂಬುವರು ತಮ್ಮ ಕುಟುಂಬದೊಂದಿಗೆ ಯಮುನಾನಗರಕ್ಕೆ ಅಂತ್ಯಕ್ರಿಯೆಗೆ ತೆರಳಿದ್ದು ಅಂತ್ಯಕ್ರಿಯೆ ಮುಗಿಸಿ ವಾಪಸ್ಸಾಗುತ್ತಿದ್ದಾಗ ವೇಗವಾಗಿ ಬಂದ ಟ್ಯಾಂಕರ್ ಕಾರಿಗೆ ಗುದ್ದಿದೆ. ಈ ಅಪಘಾತದಲ್ಲಿ ಸ್ಥಳದಲ್ಲೇ ಆರು ಮಂದಿ ದುರ್ಮರಣ ಹೊಂದಿದ್ದಾರೆ.