ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಭೀಕರ ಅಪಘಾತ; ಸಾವಿನ ಮನೆಯಿಂದ ವಾಪಸ್ಸಾಗುತ್ತಿದ್ದ ಆರು ಮಂದಿ ಮಸಣಕ್ಕೆ, ದುರಂತ!

ಸಾವಿನ ಮನೆಯಿಂದ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹರಿಯಾಣದಲ್ಲಿ ನಡೆದಿದೆ.
ಯಮುನಾನಗರ: ಸಾವಿನ ಮನೆಯಿಂದ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ  ಘಟನೆ ಹರಿಯಾಣದಲ್ಲಿ ನಡೆದಿದೆ.
ತೈಲ ಟ್ಯಾಂಕರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ರಸಲ್ಪುರ್ ನಿವಾಸಿಯಾದ ಸುರೇಂದ್ರ ಎಂಬುವರು ತಮ್ಮ ಕುಟುಂಬದೊಂದಿಗೆ ಯಮುನಾನಗರಕ್ಕೆ ಅಂತ್ಯಕ್ರಿಯೆಗೆ ತೆರಳಿದ್ದು ಅಂತ್ಯಕ್ರಿಯೆ ಮುಗಿಸಿ ವಾಪಸ್ಸಾಗುತ್ತಿದ್ದಾಗ ವೇಗವಾಗಿ ಬಂದ ಟ್ಯಾಂಕರ್ ಕಾರಿಗೆ ಗುದ್ದಿದೆ. ಈ ಅಪಘಾತದಲ್ಲಿ ಸ್ಥಳದಲ್ಲೇ ಆರು ಮಂದಿ ದುರ್ಮರಣ ಹೊಂದಿದ್ದಾರೆ. 
ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಬಿಸ್ಲಪುರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪಘಾತದ ಬಳಿಕ ಟ್ಯಾಂಕರ್ ಚಾಲಕ ಲಾರಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜು-ಗುಜ್ಜಾಗಿದ್ದು ಶವಗಳನ್ನು ಹೊರತೆಗೆಯಲು ಕಾರಿನ ಹೊರಭಾಗವನ್ನು ಸಂಪೂರ್ಣವಾಗಿ ಕತ್ತರಿಸಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com