ನವದೆಹಲಿಯಲ್ಲಿ ಮಾತನಾಡಿದ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಸಹವರ್ತಿ ಹುಸೇನ್ ಟೌಫೀಕ್ ಇಮಾಮ್ ಅವರು, ವಿಚಾರಣೆ ನಿಮಿತ್ತ ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ನನ್ನು ಭಾರತಕ್ಕೆ ಕರೆತರುವ ಪ್ರಯತ್ನಕ್ಕೆ ಬಾಂಗ್ಲಾದೇಶ ಸಂಪೂರ್ಣ ಸಹಕಾರ ನೀಡಲಿದೆ. ಯಾವುದೇ ಕಾರಣಕ್ಕೂ ಬಾಂಗ್ಲಾದೇಶದ ಗಡಿಯನ್ನು ಯಾವುದೇ ಕಾರಣಕ್ಕೂ ಭಾರತದ ವಿರುದ್ಧ ಬಳಕೆ ಮಾಡಲು ತಾವು ಅನುವು ಮಾಡಿಕೊಡುವುದಿಲ್ಲ. ಝಾಕಿರ್ ನಾಯ್ಕ್ ಬಾಂಗ್ಲಾದೇಶಕ್ಕೆ ಬರಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.