2019 ರ ಲೋಕಸಭಾ ಚುನಾವಣೇಯಲ್ಲಿ ಬಿಹಾರದಿಂದ 17 ಸ್ಥಾನಗಳಲ್ಲಿ ಸ್ಪರ್ಧಿಸಲು ಜೆಡಿಯು ತೀರ್ಮಾನಿಸಿದ್ದು, ಉಳಿದ ಸ್ಥಾನಗಳಲ್ಲಿ ಬಿಜೆಪಿಯೂ ಸೇರಿದಂತೆ ಎನ್ ಡಿಎ ಮೈತ್ರಿಕೂಟದ ಪಕ್ಷಗಳು ಸ್ಪರ್ಧಿಸಲಿವೆ. ಬಿಜೆಪಿ-ಜೆಡಿಯು ನಡುವೆ ಎಲ್ಲವೂ ಸರಿ ಇಲ್ಲ, ನಿತೀಶ್ ಕುಮಾರ್ ಬಿಜೆಪಿ ಸಖ್ಯ ತೊರೆಯಲಿದ್ದಾರೆ ಎಂಬ ವರದಿಗಳು ಪ್ರಕಟವಾಗಿದ್ದ ಹಿನ್ನೆಲೆಯಲ್ಲಿ ಜೆಡಿಯು ಕಾರ್ಯಕಾರಿಣಿ ಸಭೆ ಕುತೂಹಲ ಮೂಡಿಸಿತ್ತು. ಈ ನಡುವೆ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಒತ್ತಾಯಿಸಿ ಮೋದಿ ಸರ್ಕಾರದ ವಿರುದ್ಧ ಮುನಿಸಿಕೊಂಡು ಎನ್ ಡಿಎ ತೊರೆದಿದ್ದ ಚಂದ್ರಬಾಬು ನಾಯ್ಡು ಅವರನ್ನು ನಿತೀಶ್ ಕುಮಾರ್ ಬೆಂಬಲಿಸಿದ್ದರು. ಈ ಬೆಳವಣಿಗೆ ನಂತರ ನಿತೀಶ್ ಸಹ ಚಂದ್ರಬಾಬು ನಾಯ್ಡು ಹಾದಿಯನ್ನೇ ಹಿಡಿಯಲಿದ್ದಾರೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ ಜು.08 ರಂದು ನಡೆದ ಜೆಡಿಯು ಕಾರ್ಯಕಾರಿಣಿ ಸಭೆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ.