ಜು.08 ರಂದು ನಡೆದ ಜೆಡಿಯು ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಸಲು ತೀರ್ಮಾನಿಸಿರುವ ಜೆಡಿಯು ಭ್ರಷ್ಟಾಚಾರದ ಆರೋಪ ಹೊತ್ತಿರುವ ಆರ್ ಜೆಡಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ ಇರಲು ನಿರ್ಧರಿಸಿದೆ. ಜೆಡಿಯು-ಬಿಜೆಪಿ ಮೈತ್ರಿಯ ಬಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಜೆಡಿಯು ಕಾರ್ಯಕಾರಿಣಿ ಸಭೆಯ ನಿರ್ಧಾರ ತೆರೆ ಎಳೆದಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ತ್ಯಾಗಿ ಹೇಳಿದ್ದಾರೆ.