43 ವರ್ಷಗಳ ಹಿಂದಿನ ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡುತ್ತಿರುವ ಮೋದಿಯವರು, ಕಳೆದ ನಾಲ್ಕು ವರ್ಷಗಳಿಂದ ದೇಶದಲ್ಲಿರುವ ಅಘೋಷಿತ ತುರ್ತು ಪರಿಸ್ಥಿತಿ ಬಗ್ಗೆ ಏನು ಹೇಳುತ್ತಾರೆ? ದೇಶದಲ್ಲಿ ಇಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೃಷಿ ಯೋಜನೆಗಳು ವಿಫಲಗೊಳ್ಳುತ್ತಿವೆ. ರೈತರಿಗೆ ಹೊಸ ಸಾಲಗಳು ದೊರೆಯುತ್ತಿಲ್ಲ. ವ್ಯಾಪಾರ ವಹಿವಾಟುಗಳು ಕುಗ್ಗುತ್ತಿವೆ ಎಂದಿದ್ದಾರೆ.