ಕಳೆದ 72 ಗಂಟೆಗಳ ಅವಧಿಯಲ್ಲಿ ಮುಂಬೈ ಮಳೆ ಸಂಬಂಧಿತ ಅನಾಹುತಗಳಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಭಾರಿ ಮಳೆಯ ನಂತರ ಅನೇಕ ದೊಡ್ಡ, ಸಣ್ಣ, ಕೆರೆಗಳು ತುಂಬಿದ್ದು, ಸಂಜಯ್ ಗಾಂಧಿ ರಾಷ್ಟ್ರೀಯ ಪಾರ್ಕ್, ಕರ್ನಾಳ ಪಕ್ಷಿಧಾಮ, ಮತ್ತಿತರ ಪ್ರವಾಸೋದ್ಯಮ ಸ್ಥಳಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.ರತ್ನಗಿರಿ ಜಿಲ್ಲೆಯಲ್ಲಿ ನೀರಿನಲ್ಲಿ ಸಿಲುಕಿದ್ದ 12 ಪ್ರವಾಸಿಗರನ್ನು ರಕ್ಷಣಾ ತಂಡಗಳು ರಕ್ಷಿಸಿದ್ದಾರೆ.