ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಗೊಂದಲಗಳಿದ್ದರೆ, ಸುಪ್ರೀಂ ಕೋರ್ಟ್ ನ್ನು ಕೂಡಲೇ ಸಂಪರ್ಕಿಸಿ, ಆದರೆ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಬೇಡಿ ಎಂದು ಲೆಫ್ಟಿನೆಂಟ್ ಗೌರ್ನರ್ ಗೆ ಬರೆದಿರುವ ಪತ್ರದಲ್ಲಿ ಕೇಜ್ರಿವಾಲ್ ತಿಳಿಸಿದ್ದಾರೆ. ಜಾರಿಗೊಳಿಸುವುದಿದ್ದರೆ ಸುಪ್ರೀಂ ಕೋರ್ಟ್ ನ ಆದೇಶವನ್ನು ಯಥಾವತ್ ಜಾರಿಗೊಳಿಸಿ, ಇಲ್ಲವಾದರೆ ಸಂಪೂರ್ಣ ಆದೇಶವನ್ನು ಜಾರಿಗೊಳಿಸಬೇಡಿ, ಆದರೆ ನಿಮಗೆ ಬೇಕಾದ ಅಂಶಗಳನ್ನು ಮಾತ್ರ ಜಾರಿಗೊಳಿಸಲು ಹೇಗೆ ಸಾಧ್ಯ ಎಂದು ಕೇಜ್ರಿವಾಲ್ ಪತ್ರದಲ್ಲಿ ಕೇಳಿದ್ದಾರೆ.