ಗಲ್ಲು ಶಿಕ್ಷೆ ವಿರುದ್ಧ ಮೂವರು ಅಪರಾಧಿಗಳು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂತ್ರಸ್ಥ ಮಹಿಳೆ ತಂದೆ ಬದ್ರಿನಾಥ್ ಸಿಂಗ್ ಅವರು, ಸುಪ್ರೀ ತೀರ್ಪಿನಿಂದ ನಮ್ಮ ನಂಬಿಕೆ ನಿಜವಾಗಿದೆ. ಆದರೆ ಮುಂದೇನು? ಈಗಾಗಲೇ ಸಾಕಷ್ಟು ಸಮಯ ಕಳೆದಿದೆ. ಆದಷ್ಟು ಬೇಗ ಕಾಮುಕರನ್ನು ಗಲ್ಲಿಗೇರಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.