2013ರಲ್ಲಿ ಕೇಂದ್ರ ಸರ್ಕಾರ ಲೋಕಪಾಲ್ ಮತ್ತು ಲೋಕಾಯುಕ್ತ ಕಾಯ್ದೆ ಜಾರಿಗೆ ತಂದಿದ್ದು, ಅದರಂತೆ ಎಲ್ಲಾ ರಾಜ್ಯಗಳ ಕಡ್ಡಾಯವಾಗಿ ಲೋಕಾಯುಕ್ತ ಸಂಸ್ಥೆ ಹೊಂದಿರಬೇಕು. ಹೀಗಾಗಿ ರಾಜ್ಯ ಸರ್ಕಾರ ಲೋಕಾಯುಕ್ತ ಸಂಸ್ಥೆ ಸ್ಥಾಪನೆಗೆ ನಿರ್ಧರಿಸಿದ್ದು, ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತನಿಖೆ ನಡೆಸಲಿದೆ ಎಂದು ಜಯಕುಮಾರ್ ಅವರು ತಿಳಿಸಿದ್ದಾರೆ.