ಇತ್ತೀಚೆಗಷ್ಟೇ ಭಜರಂಗಿ ಪತ್ನಿ ಸೀಮಾ ಸಿಂಗ್ ಅವರು, ಉತ್ತರಪ್ರದೇಶದ ವಿಶೇಷ ಪೊಲೀಸರು ಜೈಲಿನಲ್ಲಿಯೇ ನನ್ನ ಪತಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬು ಆರೋಪ ಮಾಡಿದ್ದರು. ಅಲ್ಲದೆ, ಈ ವಿಚಾರವನ್ನು ನ್ಯಾಯಾಲಯ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರ ಗಮನಕ್ಕೆ ತರುವುದಾಗಿಯೂ ತಿಳಿಸಿದ್ದರು. ಇದರ ಬೆನ್ನಲ್ಲೇ ಜೈಲಿನಲ್ಲಿಯೇ ಭಜರಂಗಿಯನ್ನು ಹತ್ಯೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.