ದೆಹಲಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಹೊರತಾಗಿಯೂ ಲೆಫ್ಟಿನೆಂಟ್ ಗವರ್ನರ್ ಶಿಕ್ಷಣ ಇಲಾಖೆಯ ನಿರ್ದೇಶಕರುಗಳನ್ನು ನೇಮಕ ಮಾಡಿರುವುದು ಅಕ್ರಮ. ರಾಜ್ಯದಲ್ಲಿ ಅನಿಲ್ ಬೈಜಲ್ ಅವರು ದಾದಾಗಿರಿಯ ಆಡಳಿತ ನಡೆಸುತ್ತಿದ್ದು, ಜನರು ಆರಿಸಿದ ಸರ್ಕಾರಕ್ಕೆ ಲೆಫ್ಟಿನೆಂಟ್ ಗವರ್ನರ್ ಅಗೌರವ ತೋರಿದ್ದಾರೆ. ಒಂದು ಪ್ರಮುಖ ಸ್ಥಾನಕ್ಕೆ ಸರ್ಕಾರದೊಂದಿಗೆ ಚರ್ಚಿಸದೇ ಲೆಫ್ಟಿನೆಂಟ್ ಗವರ್ನರ್ ನೇಮಕ ಮಾಡಿರುವುದು ಸರಿಯಲ್ಲ. ಸರ್ಕಾರ ಶಿಕ್ಷಣ ಇಲಾಖೆಗೆ ಶೇ.26ರಷ್ಟು ಅನುದಾನ ನೀಡುತ್ತಿದೆ. ಹೀಗಿದ್ದು ಬೈಜಲ್ ಅವರ ನಿರ್ಧಾರ ಏಕಪಕ್ಷೀಯವಾದದ್ದು. ಇದು ಸ್ಪಷ್ಟವಾಗಿ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.