ಪ್ರಕರಣ ನ್ಯಾಯಾಲಯದಲ್ಲಿದ್ದು, ಆ ಬಗ್ಗೆ ನಾವು ಮಾತನಾಡುವುದು ಸರಿಯಲ್ಲ ಎಂದು ನಾನು ಹಲವು ಬಾರಿ ಹೇಳಿದ್ದೇನೆ. ಕಾನೂನು ಕ್ರಮ ತೆಗೆದುಕೊಳ್ಳಲದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಅಮಾಯಕರಿಗೆ ಶಿಕ್ಷೆಯಾಗಬಾರದು ಎಂದು ನಾವು ಸದಾ ಕೆಲಸ ಮಾಡುತ್ತೇವೆ. ನಾನು ಆರೋಪಿಗಳಿಗೆ ಹಾರ ಹಾಕುವುದರಿಂದ ಹತ್ಯೆಗೆ ಬೆಂಬಲ ನೀಡಿದಂತಾಗುತ್ತದೆ ಎನ್ನುವದಾದರೆ, ಆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.