ಸಲಿಂಗ ಕಾಮ ಅಪರಾಧ ಎಂಬ ತೀರ್ಪಿಗೆ ಸಂಬಂಧಿಸಿದಂತೆ ದಾಖಲಾಗಿರುವ ಅರ್ಜಿಗಳ ಕುರಿತು ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವ ಪಂಚ ಸದಸ್ಯ ಪೀಠ ಇಂತಹುದೊಂದು ಹೇಳಿಕೆ ನೀಡಿದೆ. ಪೀಠದಲ್ಲಿ ಸಿಜೆಐ ಮಿಶ್ರಾ ಅಲ್ಲದೆ ನ್ಯಾಯಮೂರ್ತಿ ಆರ್ ಎಫ್ ನಾರಿಮನ್, ಎಎಂ ಖಾನ್ವಿಲ್ಕರ್, ಡಿವೈ ಚಂದ್ರಚೂಡ್ ಮತ್ತು ಇಂದು ಮಲ್ಹೋತ್ರಾ ಅವರು ಇದ್ದರು.