ಆದರೆ ಗುರುವಾರ ಬೆಳಿಗ್ಗೆ ಘಟನೆಗೆ ವಿಚಿತ್ರ ತಿರುವು ದೊರಕಿತ್ತು. ಮನೆಯ ಮುಂಭಾಗದ ಗೇಟ್ಮುಂದೆ ಕಳುವಾದ ಆಭರಣದ ಕಟ್ಟುಮತ್ತು ಪತ್ರವೊಂದು ಕ್ಂಡಿತ್ತು. ಪತ್ರ ಒಡೆದು ನೊಡಲಾಗಿ "ನನ್ನನ್ನು ಕ್ಷಮಿಸಿ, ಹಣಕಾಸಿನ ಅವಶ್ಯಕತೆ ಇದ್ದ ಕಾರಣ ಒತ್ತಡಕ್ಕೊಳಗಾದ ನಾನು ನಿಮ್ಮ ಮನೆಯ ಚಿನ್ನವನ್ನು ಕಳವು ಮಾಡಿದೆ. ಆದರೆ ಇನ್ನೊಂದೂ ಹೀಗೆ ಮಾಡಲಾರೆ, ನನ್ನನ್ನು ಪೋಲೀಸರಿಗೆ ಹಿಡಿದು ಕೊಡಬೇಡಿ" ಎಂದು ಬರೆದಿದ್ದದ್ದು ಕ್ಂಡಿದೆ.